
ಬೀದರ:- ಸೆಪ್ಟೆಂಬರ್.29 ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆಯಲಿರುವ ಕನ್ನಡ ಕಡ್ಡಾಯ ಪರೀಕ್ಷೆಗಳನ್ನು ಬೀದರ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಮಂಗಳವಾರ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆಯಲಿರುವ ಕನ್ನಡ ಕಡ್ಡಾಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಕುರಿತು ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 43 ಪರೀಕ್ಷಾ ಕೇಂದ್ರಗಳು ಇರಲಿದ್ದು, 13604 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆಯದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಈ ಪರೀಕ್ಷೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೆಪ್ಟೆಂಬರ್.29 ರಂದು ಬೆಳಿಗ್ಗೆ 10:30 ರಿಂದ 12:30 ರವರೆಗೆ ಪರೀಕ್ಷೆ ನಡೆಯಲಿದ್ದು, ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರ ಹಾಕಬೇಕು. ಪರೀಕ್ಷ್ಯಾ ಕೊಠಡಿ ಒಳಗಡೆ ಅಭ್ಯರ್ಥಿಗಳು ಯಾವುದೇ ಮೊಬೈಲ್, ಕ್ಯಾಲ್ಕುಲೇಟರ್, ರಿಸ್ಟಾವಾಚ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ತೆಗೆದುಕೊಂಡು ಹೋಗರಬಾರದು ಎಂದು ಹೇಳಿದರು.
ಮುಖ್ಯ ಅಧಿಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಅಬ್ಸರ್ವರ್, ಸಿಟಿಂಗ್ ಸ್ಕ್ವಾಡಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ. ಒಟ್ಟು 13 ರೂಟ್ ಇರಲಿವೆ. ರೂಟ್ ಆಫಿಸರ್ ಪ್ರಶ್ನೆ ಪತ್ರಿಕೆಯನ್ನು ಅಂದು ಬೆಳಿಗ್ಗೆ 6 ಗಂಟೆಗೆ ಖಜಾನೆಗೆ ಬಂದು ತೆಗೆದುಕೊಂಡು ಹೋಗಬೇಕು ಮತ್ತು ಅಧಿಕಾರಿಗಳಿಗೆ ನೀಡಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಹೇಳಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತರಾದ ಮಹ್ಮದ್ ಶಕೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾAತ ಶಾಬಾದಕರ್, ಬೀದರ ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ, ಜಿಲ್ಲೆಯ ಎಲ್ಲಾ ತಾಲೂಕಿನ ತಹಶಿಲ್ದಾರರು ಪರೀಕ್ಷೆ ನಿಯೋಜಿತ ಪ್ರಾಂಶುಪಾಲರು, ಕಸ್ಟೋಡಿಯನ್, ಪರೀಕ್ಷಾ ಕೇಂದ್ರದ ವೀಕ್ಷಕರು, ಮಾರ್ಗಾಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.