
ಔರಾದ:-ಒಳ ಮೀಸಲಾತಿ ಜಾರಿ ಸಂಬಂಧ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು. ಮೇ 5ರಿಂದ ಮನೆಮನೆಗೆ ಬಂದು ಜಾತಿ ಸಮೀಕ್ಷೆ ಮಾಡಲಿದ್ದು. ಮಾದಿಗ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಮಾದಿಗ ಎಂದು ಬರಿಸಬೇಕು ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಗೂ ಮಾದಿಗ ಸಮುದಾಯದ ಯುವ ಮುಖಂಡರಾದ ಸುಧಾಕರ ಕೊಳ್ಳುರ ಅವರು ಪತ್ರಿಕ ಪ್ರಕಟಿನಲ್ಲಿ ತಿಳಿಸಿದ್ದಾರೆ.
ಸಮುದಾಯ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಸರ್ಕಾರಿ ಸೌಲಭ್ಯ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಒಳ ಮೀಸಲಾತಿ ಜಾರಿಗೆ ಸಮೀಕ್ಷೆ ನಡೆಸಲಾಗುತ್ತಿದೆ.
ಈ ಸಮೀಕ್ಷೆ ನಂತರ ಸಿಗುವ ಅಂಕಿ ಅಂಶ ಆದರಿಸಿ ಮೀಸಲು ಪ್ರಮಾಣ ಸಿಗುತ್ತದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಮಾದಿಗ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಎಂದು ಮಾತ್ರ ಬರೆಸಬೇಕು ಎಂದು ಪ್ರಕಟಿನಲ್ಲಿ ತಿಳಿಸಿದ್ದಾರೆ.