September 7, 2025

ಬೀದರ:- ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭಂಗೂರ ಹಾಗೂ ಸಿಂದೊಲ್ ಮಾರ್ಗ ಮಧ್ಯ ಇರುವ ಸೇತುವೆ ಸಂಪೂರ್ಣ ಜಲಾವೃತವಾಗಿದ್ದು ಸ್ಥಳಕ್ಕೆ ಗುರುವಾರ ಬೀದರ ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ  ಮಾಣಿಕರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮೊನ್ನೆಚ್ಚರಿಕೆ ಕ್ರಮವಾಗಿ ಆ ಮಾರ್ಗದಿಂದ ಯಾರು ಸಂಚರಿಸದಂತೆ ಕೆಳ ಹಂತದ ಸಿಬ್ಬಂದಿಗಳಿಗೆ ಸೂಚಿಸಿ  ಬ್ಯಾರಿಕೆಡ್ ಅಳವಡಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕ ಪಂಚಾಯತ್ ಇತರೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771